ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ: ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ

Update: 2024-09-09 13:29 GMT

ಮಂಗಳೂರು: ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

5 ಕಿ.ಮೀ. ವ್ಯಾಪ್ತಿಯಲ್ಲಿನ ಡಯಾಲಿಸಿಸ್ ರೋಗಿಗಳು (ಸ್ಥಳೀಯ), ಹಿರಿಯ ನಾಗರಿಕರು, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದವರು, ವಿಕಲಚೇತನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೋಗಿಗಳನ್ನು ಪರಿಗಣಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಆಡಳಿತ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇವರನ್ನು ಬೆಳಗ್ಗೆ 9ರಿಂದ ಸಂಜೆ 4:30ರೊಳಗೆ ಭೇಟಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News