ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ ಸಸಿ ವಿತರಣೆ

Update: 2024-08-17 18:10 GMT

ಉಳ್ಳಾಲ:ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ ನೇತೃತ್ವದಲ್ಲಿ ಸಸಿ ವಿತರಣಾ ಕಾರ್ಯಕ್ರಮ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು ಮಾತನಾಡಿ ಕಾಂಗ್ರೆಸ್ ಕಿಸಾನ್ ಘಟಕ ರೈತರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಂತಹ ಘಟಕವಾಗಿದೆ, ಪ್ರತೀ ವರ್ಷ ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿದರು. ಕಿಸಾನ್ ಘಟಕದ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪಿಲಾರ್, ಪ್ರಧಾನ ಕಾರ್ಯದರ್ಶಿ ಹಸನ್ ಕುಂಞಿ ಹಾಜಿ, ಉಪಾಧ್ಯಕ್ಷ ಬಶೀರ್ ಮುಂಡೋಳಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಕೆ ರಹ್ಮಾನ್ ಕೋಡಿಜಾಲ್, ಮಾಜಿ ತಾಲೂಕು ಪಂ. ಅಧ್ಯಕ್ಷ ಮೊಹಮ್ಮದ್ ಮೋನು ಪಾವೂರು, ಎನ್.ಎಸ್.ಯು.ಐ ಉಳ್ಳಾಲ ಘಟಕದ ಅಧ್ಯಕ್ಷ ಶಾಹಿಲ್, ಬಾಸ್ಕರ್ ತೊಕ್ಕೋಟ್ಟು, ದಿನೇಶ್ ಕುಂಪಲ, ಮನ್ಸೂರ್ ಮಂಚಿಲ, ನಾಗೇಶ್ ತೊಕ್ಕೋಟ್ಟು, ಶೌಕತ್ ಆಲಿ , ಜಸಿಂತಾ ಮೆಂಡೋಸಾ, ಮತ್ತಿತರರು ಉಪಸ್ಥಿತರಿದ್ದರು.

ತಂಝೀಲ್ ಅಳೇಕಲ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News