ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ದ.ಕ ಜಿಲ್ಲಾ ಕಾಂಗ್ರೆಸ್‌ ಘಟಕ ಆಗ್ರಹ

Update: 2024-09-19 18:04 GMT

ಮಂಗಳೂರು: ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದೆ.

ಮುನಿರತ್ನ ಅವರು ನಿಂದನಾತ್ಮಕ ಪದಗಳನ್ನು ಬಳಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವು ದರಿಂದ, ರಾಜ್ಯದ ದಲಿತರ ಮತ್ತು ಮಹಿಳೆಯರ ಮನಸ್ಸಿಗೆ ಅತೀವ ನೋವು ಉಂಟಾಗಿದೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಗುರುವಾರ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ.ಹೊನ್ನಯ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮ್‌ನಾಥ್ ಪಿ.ಬಿ ಬಳ್ಳಾಲ್ ಬಾಗ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಜಯಕುಮಾರ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಾಂಗ್ರೆಸ್ ನಾಯಕರಾದ ಪ್ರಕಾಶ್ ಕೋಡಿಕಲ್, ಇಂದಿರಾ ನಾಗೇಶ್, ಗುರುಪ್ರಸಾದ್ ಮೂಳೂರು, ಅಭಿಷೇಕ್, ಬಾಬು ಅಳಿಯೂರು ಮತ್ತು ಇತರರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News