ಆ. 14ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Update: 2024-08-13 15:32 GMT

ಮಂಗಳೂರು,ಆ.13: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್‌14ರಿಂದ ದ.ಕಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆ. 14 ರಂದು ರಾತ್ರಿ 7:45ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ - ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಕಾರ್ಯಕ್ರಮ, 10:30ಕ್ಕೆ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ, ಮಧ್ಯಾಹ್ನ 12 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಬಾಲಕಿಯರ ಕ್ರೀಡಾವಸತಿ ನಿಲಯ ಉದ್ಘಾಟನೆ. 12:45ಕ್ಕೆ ನಗರದ ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಮಧ್ಯಾಹ್ನ 3 ಗಂಟೆಗೆ ವೆನ್‌ಲಾಕ್ ಜಿಲ್ಲಾಆಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ಉದ್ಘಾಟನಾ ಸಮಾರಂಭ, ಸಂಜೆ 4:15 ಕ್ಕೆ ನಗರದ ಟಿ.ಎಂ.ಎ. ಪೈ ಹಾಲ್‌ನಲ್ಲಿ ಸೈಬರ್ ಸೇಫ್ ಮಂಗಳೂರು ವಾಕಥಾನ್, 5 ಗಂಟೆಗೆ ಮಂಗಳೂರು ಫಾದರ್ ಮುಲ್ಲರ್ ಕನ್ವೆನ್ಸನ್ ಸೆಂಟರ್-ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಂತರ ರಾತ್ರಿ 11:10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News