ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ನೆಹರೂ ಜನ್ಮ ದಿನಾಚರಣೆ

Update: 2023-11-14 14:15 GMT

ಮಂಗಳೂರು: ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಸ್ವಾತಂತ್ರ್ಯದ ನಂತರ ಭವ್ಯ ಭಾರತದ ಭವಿಷ್ಯಕ್ಕೆ ಸುಭದ್ರ ಅಡಿಪಾಯ ಹಾಕಿದ್ದರು. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆ ಯನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆ ಅಪಾರ. ದೇಶವನ್ನು ಹಲವು ಕ್ಷೇತ್ರಗಳಲ್ಲಿ ಅವರು ಅಭಿವೃದ್ಧಿ ಪಡಿಸಿದ್ದಾರೆ. ಪ್ರಜಾಪ್ರಭುತ್ವ, ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟು ಅವರು ಬದುಕಿದ್ದರು ಎಂದು ವಿಧಾನ ಪರಿಷತ್ ಸದಸ್ಯ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ನೆಹರೂ ದೀನ ದಲಿತರ ಉದ್ಧಾರಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ, ಕೃಷಿ, ನೀರಾವರಿ ಯೋಜನೆಗಳನ್ನು ಪ್ರಗತಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಲು ಭಾರತವು ತನ್ನದೇ ಆದ ಬಾಹ್ಯಾಕಾಶ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭ ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕ ಐವನ್ ಡಿಸೋಜ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಮುಖಂಡರಾದ ಶಾಹುಲ್ ಹಮೀದ್, ಲುಕ್ಮಾನ್ ಬಂಟ್ವಾಳ್, ಬಿ.ಎಂ. ಅಬ್ಬಾಸ್ ಅಲಿ, ಜೆ.ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಕೆ.ಅಪ್ಪಿ, ಜೆಸಿಂತಾ ಆಲ್ಫ್ರೆಡ್, ಲ್ಯಾನ್ಸಿ ಲಾಟ್ ಪಿಂಟೊ, ಲತೀಫ್ ಕಂದಕ್, ಝೀನತ್ ಸಂಶುದ್ದೀನ್, ಸಂಶುದ್ದೀನ್ ಕುದ್ರೋಳಿ, ನೀರಜ್‌ ಚಂದ್ರಪಾಲ್, ಸಮೀರ್ ಪಜೀರ್, ಗಿರೀಶ್ ಆಳ್ವ, ಶುಭೋದಯ ಆಳ್ವ, ಉಮ್ಮರ್ ಫಾರೂಕ್ ಪುದು, ಗಣೇಶ್ ಪೂಜಾರಿ, ವಿಕಾಶ್ ಶೆಟ್ಟಿ, ಗಿರೀಶ್ ಶೆಟ್ಟಿ, ಟಿ.ಹೊನ್ನಯ್ಯ, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪದ್ಮನಾಭ ಅಮೀನ್, ಟಿ.ಕೆ.ಶೈಲಜಾ, ಯೋಗಿಶ್ ನಾಯಕ್, ಹೈದರ್ ಬೋಳಾರ್, ಝುಬೈರ್ ತಲಮೊಗರು, ಉದಯ್ ಆಚಾರ್ಯ, ಚೇತನ್ ಕುಮಾರ್, ಶಾಂತಳಾ ಗಟ್ಟಿ, ಇಮ್ರಾನ್ ಎ.ಆರ್, ಜಾರ್ಜ್, ದಿನೇಶ್ ರಾವ್, ನೀತ್ ಶರಣ್, ಸತೀಶ್ ಪೆಂಗಲ್, ಅಲ್ತಾಫ್ ಸುರತ್ಕಲ್, ಮಂಜುಳಾ ನಾಯಕ್, ಆಸೀಫ್ ಬೆಂಗ್ರೆ, ಮಲ್ಲಿಕಾರ್ಜುನ ಕೋಡಿಕಲ್, ಸಿದ್ದೀಕ್ ಅಮ್ಮೆಮ್ಮಾರ್, ಅನ್ಸಾರುದ್ದೀನ್ ಸಾಲ್ಮರ, ನಜೀಬ್ ಮಂಚಿ, ಶೀತರಾಮ ಶೆಟ್ಟಿ, ಹುಸೈನ್ ಕಾಟಿಪಳ್ಳ, ಸಮರ್ಥ್ ಭಟ್, ಜಯರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕ್ಕಿಂ ಡಿಸೋಜ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News