ಗಾಂಜಾ ಸೇವನೆ: ನಾಲ್ಕು ಮಂದಿ ಸೆರೆ

Update: 2023-09-03 16:28 GMT

ಉಪ್ಪಿನಂಗಡಿ: ಗಾಂಜಾ ಸೇವನೆಗೈದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನು ವಶಕ್ಕೆ ಪಡೆದಿರುವ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬುಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್ (23) ಹಾಗೂ ಬಿಳಿಯೂರು ಗ್ರಾಮದ ಸಲೀಂ ಹುಸೈನ್ ಬಂಧಿತ ಆರೋಪಿಗಳು. ಇವರು ಸೆ.2ರಂದು ಇಳಂತಿಲ ಗ್ರಾಮದ ರಿಫಾಯಿನಗರದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿದ್ದಾಗ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದಾಗ ಅವರು ಗಾಂಜಾ ಸೇವಿಸಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಇವರು ಗಾಂಜಾ ಸೇವಿಸಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲೂ ದೃಢಪಟ್ಟಿದ್ದು, ಇವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಪೆರ್ನೆ ನಿವಾಸಿಗಲಾದ ಶಫೀಕ್ (24) ಹಾಗೂ ಸಲೀಂ (24) ಎಂಬವರು ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದು ಕಂಡು ಬಂದಾಗ ಸಂಶಯಗೊಂಡು ಪೊಲೀಸರು ಅವರನ್ನು ವಿಚಾರಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಇವರು ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ. ಇವರನ್ನು ವಶಕ್ಕೆ ಪಡೆದಿರುವ ಪೊಲೀಸರು ಇವರಿಂದ ಹೆಚ್ಚಿನ ವಿಚಾರಣೆಗಾಗಿ 7,500 ಸಾವಿರದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News