ಹೃದಯಾಘಾತ: ಜೋಕಟ್ಟೆಯ ಯುವಕ ಸೌದಿ ಅರೆಬಿಯಾದಲ್ಲಿ ನಿಧನ

Update: 2023-11-02 17:42 GMT

ಸುರತ್ಕಲ್‌, ನ.2: ಇಲ್ಲಿನ ಜೋಕಟ್ಟೆ ಕೆಬಿಎಸ್‌ ನಿವಾಸಿ ಇರ್ಷಾದ್‌ (33) ಹೃದಯಾಘಾತಕ್ಕೊಳಗಾಗಿ ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಜೋಕಟ್ಟೆ ಕೆಬಿಎಸ್‌ ನಿವಾಸಿ ಅಬ್ದುಲ್‌ ರಝಾಕ್‌ ಅವರ ಮಗ ಇರ್ಶಾದ್‌ 7ವರ್ಷಗಳಿಂದ ಸೌದಿ ಅರೆಬಿಯಾದ ಅಲ್‌ ಕೋಬರ್‌ ನಲ್ಲಿ ಇಲೆಕ್ಟ್ರಾನಿಕ್‌ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದರು. ಇತ್ತೀಚೆಗೆ ಒಂದೂವರೆ ವರ್ಷಗಳ ಹಿಂದೆ ತಾಯ್ನಾಡಿಗೆ ಬಂದು ಸೌದಿ ಅರೆಬಿಯಾಕ್ಕೆ ತೆರಳಿದ್ದರು.

ಗುರುವಾರ ಬೆಳಗ್ಗೆ ಇರ್ಶಾದ್‌ ಅವರಿಗೆ ತೀವೃ ತರಹದ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರ ಸ್ನೇಹಿತರು ಅಲ್ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇರ್ಶಾದ್‌ ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದಾಗಿ ಘೋಶೀಸಿದರು ಎಂದು ಅವರ ಕುಟುಂಬ ಮೂಲ ಮಾಹಿತಿ ನೀಡಿದೆ.

ಮೃತ ಇರ್ಶಾದ್‌ ವಿವಾಹಿತರಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರು, ಮೂರು ಮಂದಿ ಸಹೋದರಿಯನ್ನು ಅಗಲಿದ್ದಾರೆ.

ಕರೆ ಮಾಡಿ ಮಾತನಾಡಿದ್ದ ಅರ್ಧ ಗಂಟೆಯಲ್ಲೆ ಬಂತು ಮರಣ ವಾರ್ತೆ

ಇಂದು ಬೆಳಗ್ಗೆ 9.30ರ ಸುಮಾರಿಗೆ ಸಹೋದರ ಇಮ್ರಾನ್‌ ಅವರಿಗೆ ವೀಡಿಯೊ ಕರೆ ಮಾಡಿದ್ದ ಇರ್ಶಾದ್‌, ಅನಾರೋಗ್ಯ ವಿದ್ದು ಊರಿಗೆ ಬರುವುದಾಗಿ ಹೇಳಿದ್ದ. ಊರಿಗೆ ಬಂದು ಚಿಕಿತ್ಸೆ ಪಡೆಯುವ ಕುರಿತು ಸಹೋದರನ ಜೊತೆ ಸಮಾಲೋಚನೆ ಯನ್ನೂ ಮಾಡಿದ್ದ. ಎಲ್ಲರೊಂದಿಗೂ ವೀಡಿಯೊ ಕಾಲ್‌ ನಲ್ಲಿ ಮಾತನಾಡಿ ಕರೆ ಕಟ್‌ ಮಾಡಿದ್ದ. ಆದರೆ, ಕರೆ ಕಟ್‌ ಮಾಡಿದ ಅರ್ಧಗಂಟೆಯ ಬಳಿಕ ಸುಮಾರು 10ಗಂಟೆಯ ಸುಮಾರಿಗೆ ಆತನಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿರುವುದಾಗಿ ಸೌದಿ ಅರೆಬಿಯಾದಿಂದ ಕರೆ ಬಂತು ಎಂದು ಸಹೋದರ ಇಮ್ರಾನ್‌ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

ಜೋಕಟ್ಟೆ ನಿವಾಸಿ ಇರ್ಶಾದ್‌ ಅವರು ಮೃತದೇಹ ಈಗ ಸೌದಿ ಅರೆಬಿಯಾದ ಅಲ್‌ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಯಲ್ಲಿದ್ದು, ಶುಕ್ರವಾರ ಜುಮಾ ನಮಾಝಿನ ಬಳಿಕ ಅಲ್‌ ಕೋಬರ್ನ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಅವರ ಸಹೋದರ ಇಮ್ರಾನ್‌ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News