ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮ ಉದ್ಘಾಟನೆ

Update: 2023-09-19 12:39 GMT

ಮಂಗಳೂರು, ಸೆ.19: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹ ಭಾಗಿತ್ವದಲ್ಲಿ ನಗರದ ಬಂಟ್ಸ್ ಹಾಸ್ಟೇಲ್‌ನ ಓಂಕಾರ್ ನಗರದಲ್ಲಿ ಮಂಗಳವಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು.

ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ. ಜೈರಾಜ್ ಬಿ. ರೈ ಮತ್ತು ಸೌಮ್ಯ ಜೆ. ರೈ ಕಾರ್ಯಕ್ರಮ ಉದ್ಘಾಟಿಸಿದರು.

ಮಣಿಪಾಲದ ದಶರಥ ನಗರದ ಶ್ರೀ ವೈಷ್ಣವಿ ದುರ್ಗಾ ದೇವಸ್ಥಾದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ. ಹೆಗ್ಡೆ ತೆನೆ ವಿತರಿಸಿದರು. ಇಎಸ್‌ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆಎಂ ಶೆಟ್ಟಿ, ಕೋಶಾಧಿಕಾರಿ ರಾಮ ಮೋಹನ್ ರೈ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ. ನಾಗರಾಜ ಶೆಟ್ಟಿ, ಬಿ. ಶೇಖರ ಶೆಟ್ಟಿ, ಸುಧಾಕರ ಎಸ್. ಪೂಂಜ, ವಸಂತ ಶೆಟ್ಟಿ, ಶರ್ಮಿಳಾ ಎಸ್. ಆಳ್ವ, ಭಾರತಿ ಜಿ. ಶೆಟ್ಟಿ, ಅರುಣಾ ಎಸ್. ಶೆಟ್ಟಿ, ಆಶಾ ಜ್ಯೋತಿ ರೈ ಉಪಸ್ಥಿತರಿದ್ದರು.

ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News