ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿಯ ನೂತನ ಕಚೇರಿ, ಕಾರ್ಪೋರೇಟರ್ ಕಚೇರಿ ಉದ್ಘಾಟನೆ

Update: 2023-09-10 17:35 GMT

ಮಂಗಳೂರು, ಸೆ.10: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಕಚೇರಿ ಹಾಗೂ ಕಾರ್ಪೊರೇಟರ್ ಕಚೇರಿಯ ಉದ್ಘಾಟನಾ ಸಮಾರಂಭವು ರವಿವಾರ ಚೊಕ್ಕಬೆಟ್ಟುನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಗುರುಪುರ ವಹಿಸಿದ್ದರು. ಇಸ್ಮಾಯಿಲ್ ದಾರಿಮಿ ಉಸ್ತಾದ್ ದುಅ ನೆರವೇರಿಸಿದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಕಚೇರಿಯನ್ನು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹಾಗೂ ಮಹಾನಗರ ಪಾಲಿಕೆ ಸದಸ್ಯರ ಕಚೇರಿಯನ್ನು ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಮನಪಾ ಸದಸ್ಯೆ ಶಂಶಾದ್ ಅಬೂಬಕ್ಕರ್, ಜಿಲ್ಲಾ ಸಮಿತಿ ಸದಸ್ಯ ಸಮೀಮ್ ಹಳೆಯಂಗಡಿ, ಎಂ.ಜೆ.ಎಂ ಮಸೀದಿ ಕಾರ್ಯದರ್ಶಿ ಶಿಹಾಬುದ್ದೀನ್‌, ಹಿಬಾದುಲ್ಲಾ ಚೊಕ್ಕಬೆಟ್ಟು, ವಿಮೆನ್ಸ್‌ ಇಂಡಿಯಾ ಮೂವ್ಮೆಂಟ್‌ ಜಿಲ್ಲಾ ಕಾರ್ಯದರ್ಶಿ ಅಝ್ವೀನಾ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷೆ ಅಫ್ಸಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News