ಇಸ್ರೇಲ್ ದೇಶದಲ್ಲಿ ದ.ಕ. ಜಿಲ್ಲೆಯ ನಾಗರಿಕರಿದ್ದಲ್ಲಿ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ

Update: 2023-10-09 17:28 GMT

ಮಂಗಳೂರು: ಇಸ್ರೇಲ್ ದೇಶದ ಈಗಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ ಮಾಹಿತಿಯನ್ನು ದ.ಕ.ಜಿಲ್ಲಾಧಿಕಾರಿಯವರ ಕಚೇರಿ ಮಂಗಳೂರಿನಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0824-2442590 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಕೂಡಲೇ ವಿವರ ನೀಡುವಂತೆ ಕೋರಲಾಗಿದೆ.

ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ದ.ಕ.ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News