ಕಡಬ: ಬೆನ್ನಟ್ಟಿದ ಕಾಡಾನೆಗಳು; ಮೂವರಿಗೆ ಗಾಯ

Update: 2023-12-16 06:49 GMT

ಕಡಬ, ಡಿ.16: ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ರಬ್ಬರ್ ಟಾಪಿಂಗ್ ಕಾರ್ಮಿಕರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ಸಂಭವಿಸಿದೆ.

ಗಾಯಗೊಂಡವರನ್ನು ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿದ್ದು,  ಆನೆಗಳು ಬೆನ್ನಟ್ಟಿದಾಗ ಭಯಭೀತರಾಗಿ ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ. ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News