ಕಡಬ: ಡೆಂಗ್ಯೂ, ಮಲೇರಿಯಾ ಜ್ವರ; ಯುವಕ ಮೃತ್ಯು

Update: 2024-01-31 11:33 GMT

ಕಡಬ: ಡೆಂಗ್ಯೂ ಮತ್ತು ಮಲೇರಿಯಾ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.

ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಎಂಬವರು ಮೃತಪಟ್ಟವರು.

ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ಗೆ ಅವರು ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಶಿಜು ಅವರು ಮೃತಪಟ್ಟಿದ್ದರು.

ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮ ಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News