ಕಲ್ಲಡ್ಕ ಪ್ರಭಾಕರ ಭಟ್ಟರ ಬಗ್ಗೆ ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು: ಎಚ್.‌ಡಿ ಕುಮಾರಸ್ವಾಮಿ

Update: 2023-12-10 10:48 GMT

ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್  ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಹಿಂದೆ ಕೆಲವರು ನನಗೆ ಅವರ ಬಗ್ಗೆ ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ  ಕ್ರೀಡಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಚ್.‌ ಡಿ ಕುಮಾರಸ್ವಾಮಿ ಅವರು ಪ್ರಭಾಕರ ಭಟ್‌ ಅವರನ್ನು ಹೊಗಳಿ ಮಾತನಾಡಿದ್ದಾರೆ.

ಈ ಕ್ರೀಡೋತ್ಸವ ಕಾರ್ಯಕ್ರಮವು ನನ್ನ ಜೀವನದ ಅವಿಸ್ಮರಣೀಯ ಕ್ಷಣ. ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅತ್ಯುತ್ತಮ ಶಿಕ್ಷಣ ಕೊಡುವುದರ ಜೊತೆಗೆ, ಗುರುಕುಲ ಸಂಸ್ಕೃತಿಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಮೆಚ್ಚುಗೆ ಮಾತುಗಳನ್ನಾಡಿದರು.

ಈ ಹಿಂದೆ ಬೇರೆ ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಆದರೆ ಅಂದು ನನ್ನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ಮಕ್ಕಳು ಚಂದ್ರಯಾನ ಉಡಾವಣೆ ಪ್ರದರ್ಶನವನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದಾರೆ. ತಮ್ಮ ಭಾಷನದ ಕೊನೆಯಲ್ಲಿ ಕುಮಾರಸ್ವಾಮಿ ಅವರು "ಜೈ ಶ್ರೀರಾಮ್” ಎಂದು ಘೋಷಣೆ ಕೂಗಿ ಮಾತು ಮುಗಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News