ಕೊಣಾಜೆ: ಯುವಕ ಆತ್ಮಹತ್ಯೆ

Update: 2023-11-21 16:54 GMT

ಕೊಣಾಜೆ:  ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕೊಣಾಜೆ‌ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ನಡೆದಿದೆ.

ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ .ನ.20 ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದ್ದು, ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ.

ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಕೊಣಾಜೆ‌ ಠಾಣೆಯಲ್ಲಿ ಪ್ರಕರಣ‌‌ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News