ನ.4-5: ಕೆಪಿಎಸ್ಸಿ ಪರೀಕ್ಷೆ ಹಿನ್ನೆಲೆ; ನಿಷೇಧಾಜ್ಞೆ ಜಾರಿ

Update: 2023-11-03 16:39 GMT

ಮಂಗಳೂರು: ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನ.4 ಮತ್ತು 5ರಂದು ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಸಂದರ್ಭ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶ ಹೊರಡಿಸಿದ್ದಾರೆ.

ನ.4ರಂದು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಮತ್ತು ನ.5ರಂದು ಬೆಳಗ್ಗೆ 10ರಿಂದ ಪೂ.11:30 ಹಾಗೂ ಮಧ್ಯಾಹ್ನ 2ರಿಂದ 4 ರವರೆಗೆ ನಗರದ ಕಾರ್‌ಸ್ಟ್ರೀಟ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ಟ್ರೀಟ್ ಮಹಿಳಾ ಪದವಿ ಪೂರ್ವ ಕಾಲೇಜು, ಬಲ್ಮಠ ಮಹಿಳಾ ಪದವಿ ಪೂರ್ವ ಕಾಲೇಜಿನ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News