ಮಂಗಳೂರು| ಕಾರು ಢಿಕ್ಕಿ; ಸ್ಕೂಟರ್‌ ಸವಾರ ಗಂಭೀರ

Update: 2024-01-17 15:17 GMT

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ಮರೋಳಿಯಲ್ಲಿ ಬುಧವಾರ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದಾರೆ. ಅವರ ಪತ್ನಿ ರಮ್ಲತ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ.

ಬಜ್ಪೆ ಸಮೀಪದ ಆದ್ಯಪಾಡಿಯ ಮುಹಮ್ಮದ್ ಹನೀಫ್ ತುಂಬೆಯಿಂದ ನಂತೂರು ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಸ್ಕೂಟರ್ ಮುಂದಿನಿಂದ ಚಲಿಸುತ್ತಿದ್ದ ಇನ್ನೊಂದು ಕಾರಿಗೂ ಬಡಿದಿದೆ. 

ಆದ್ಯಪಾಡಿಯ ಮುಹಮ್ಮದ್ ಹನೀಫ್ ಪ್ರಸಕ್ತ ಕುದ್ರೋಳಿಯಲ್ಲಿ ವಾಸವಾಗಿದ್ದಾರೆ. ತುಂಬೆಯಲ್ಲಿ ನಡೆದ ತನ್ನ ಅಣ್ಣನ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪತ್ನಿಯ ಜೊತೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News