ಮಂಗಳೂರು: ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

Update: 2023-10-12 06:39 GMT

ಸಾಂದರ್ಭಿಕ ಚಿತ್ರ 

ಮಂಗಳೂರು, ಅ.12: ನಗರದ ಕುಂಟಿಕಾನದ ಸರ್ವಿಸ್ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿರುವುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ.

ಇವರು ಬುಧವಾರ ರಾತ್ರಿ ಕುಂಟಿಕಾನ ಸರ್ವಿಸ್ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಲ್ಲಿದ್ದ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಉರುಳಿಬಿದ್ದಿದ್ದರೆನ್ನಲಾಗಿದೆ. ಇದೇವೇಳೆ ಅದೇ ರಸ್ತೆಯಾಗಿ ಎದುರಿನಿಂದ ಬರುತ್ತಿದ್ದ ಕಾರು ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಕೌಶಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News