ಮಂಗಳೂರು: ಮಾದಕ ವಸ್ತು ಸೇವನೆ ಆರೋಪ; ಯುವಕ ಸೆರೆ

Update: 2023-08-31 14:43 GMT

ಮಂಗಳೂರು: ನಗರದ ಲೇಡಿಹಿಲ್ ಬಳಿ ಮಾದಕ ವಸ್ತು ಸೇವನೆಗೈದ ಆರೋಪದ ಮೇಲೆ ಕೊಂಚಾಡಿ-ದೇರೆಬೈಲ್ ನಿವಾಸಿ ಉದಿತ್ (24) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಆ.31ರಂದು ಮಧ್ಯಾಹ್ನ 12.30ಕ್ಕೆ ಲೇಡಿಹಿಲ್ ಬಳಿ ನಿಂತಿದ್ದ ಯುವಕ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ಅನುಮಾನಗೊಂಡು ವಿಚಾರಣೆ ನಡೆಸಿ ವಶಕ್ಕೆ ಪಡೆಯಲಾಯಿತು. ಬಳಿಕ ಆತನನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪ್ರಕರಣ ದಾಖಲಿಸಿರುವ ಬರ್ಕೆ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News