ಮಂಗಳೂರು| ಅನುಚಿತ ವರ್ತನೆ ಆರೋಪ: ಯುವಕನಿಗೆ ಸಾರ್ವಜನಿಕರು ಹಲ್ಲೆ

Update: 2024-09-24 14:11 GMT

ಮಂಗಳೂರು: ನಗರದ ನವಭಾರತ್ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಶಬರಿ ಎಂದು ಗುರುತಿಸಲಾಗಿದೆ.

ಈತ ಮಂಗಳವಾರ ಬೆಳಗ್ಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಎನ್ನಲಾಗಿದೆ. ತಕ್ಷಣ ಸಾರ್ವಜನಿಕರು ಆರೋಪಿ ಶಬರಿಯನ್ನು ಹಿಡಿದು ಅಂಗಿ ಬಿಚ್ಚಿಸಿ ಹಲ್ಲೆ ನಡೆಸಿದ ಬಳಿಕ ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News