ಮಂಗಳೂರು: ಸ್ವಾತಂತ್ರ್ಯದಿನದ ಅಂಗವಾಗಿ ರಕ್ತದಾನ ಶಿಬಿರ, ಆಯುಷ್ಮಾನ್ ಕಾರ್ಡ್ ವಿತರಣೆಗೆ ಚಾಲನೆ

Update: 2023-08-13 15:42 GMT

ಮಂಗಳೂರು,ಆ.13;ನಗರದ ಯೆಯ್ಯಾ ಡಿಯ ಅನಘ ಸುಝಕಿ ದ್ವಿಚಕ್ರ ವಾಹನಗಳ ಪ್ರದರ್ಶನ ಮಳಿಗೆಯಲ್ಲಿಂದು 76 ನೆ ಸ್ವಾತಂತ್ರ್ಯ ದಿನದ ಪೂರ್ವ ಭಾವಿಯಾ ಗಿ ಸಾರ್ವಜನಿಕರಿಗೆ ವೆನ್ಲಾಕ್ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ರಕ್ತ ದಾನ ಶಿಬಿರ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅನಘ ಸುಝಕಿ ಮಳಿಗೆಯ ಪ್ರವರ್ತಕ ರಾದ ವೆಂಕಟ ಫಣಿಯವರು ಮಾತನಾಡುತ್ತಾ,ಈ ಬಾರಿಯ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ನಮ್ಮ ಗ್ರಾಹಕರ ಜೊತೆ ಪರಿಸರದ ಎಲ್ಲಾ ಸಾರ್ವಜನಿಕರಿಗೆ ಉಪಯೋಗ ವಾಗುವ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳುವ ಯೋಚನೆ ಮಾಡಿ ನಮ್ಮ ಮಳಿಗೆಯಲ್ಲಿ ಪ್ರಥಮ ಬಾರಿಗೆ ರಕ್ತದಾನ ಶಿಬಿರ ವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆವು ಈ ಬಗ್ಗೆ ವೆನ್ಲಾಕ್ ಸರಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಮಗೆ ಸಹಕಾರ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ಮಾಡಲು ವ್ಯವಸ್ಥೆ ಮಾಡಲಾಗಿದೆ.ವಾಹನಗಳ ಪ್ರದರ್ಶನ ಗಳ ಮಳಿಗೆಯಲ್ಲಿಯೂ ಈ ರೀತಿಯ ಕಾರ್ಯಕ್ರಮ ಸ್ವಾತಂತ್ರ್ಯ ದಿನದ ನೆನಪಿನಲ್ಲಿ ಹಮ್ಮಿಕೊಂಡ ಸಂದರ್ಭದಲ್ಲಿ ಸಾರ್ವಜನಿಕ ರು ಉತ್ತಮ ಪ್ರತಿಕ್ರಿಯೆ ನೀಡಿರುವುದು ಸಂತಸ ತಂದಿದೆ ಎಂದು ವೆಂಕಟ ಫಣಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವೆನ್ಲಾಕ್ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ಫಲಕ್ ಅವರ ತಂಡ ಮತ್ತು ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನ ಮೇಲ್ವಿಚಾರಕರಾದ ಆಂಟೊನಿ, ಅನಘ ಸುಝಕಿ ಯೆಯ್ಯಾಡಿಯ ಶಾಖೆಯ ಮುಖ್ಯ ಸಿಬ್ಬಂದಿ ಪೂರ್ಣಿಮಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News