ಮಂಗಳೂರು: ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

Update: 2023-07-25 15:44 GMT

ಸಾಂದರ್ಭಿಕ ಚಿತ್ರ

ಮಂಗಳೂರು, ಜು.25: ನಗರದ ಬಂದರ್‌ನ ಮೀನುಗಾರಿಕೆ ದಕ್ಕೆಯಲ್ಲಿ ಮೀನುಗಾರರೊಬ್ಬರು ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲದ ನಿವಾಸಿ ಮುಝಮ್ಮಿಲ್ (32) ಮೃತಪಟ್ಟ ಯುವಕ.

ಮಂಗಳವಾರ ಸಂಜೆ ಸುಮಾರು 4:30ರ ವೇಳೆಗೆ ದಕ್ಕೆ ಮೀನುಗಾರಿಕಾ ಜೆಟ್ಟಿ ಬಳಿ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಇತರ ಮೀನುಗಾರರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News