ಮಂಗಳೂರು: ನೂತನ ಡಿಸಿಪಿ ಅಧಿಕಾರ ಸ್ವೀಕಾರ

Update: 2023-09-06 16:17 GMT

ಮಂಗಳೂರು, ಸೆ.6: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಸಿದ್ದಾರ್ಥ ಗೋಯಲ್ ಬುಧವಾರ ಅಧಿಕಾರ ಸ್ವೀಕರಿಸಿದರು.

2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿದ್ಧಾರ್ಥ ರಾಜಸ್ಥಾಾನದವರು. ತುಮಕೂರು ಜಿಲ್ಲೆಯ ತಿಪಟೂರು ಉಪವಿಭಾಗದ ಎಎಸ್‌ಪಿಯಾಗಿದ್ದರು. ಇಂಜಿನಿಯರ್ ಪದವೀಧರರಾಗಿರುವ ಇವರು ಅಹ್ಮದಾಬಾದ್ ಐಐಎಂನಿಂದ ಎಂಬಿಎ ಪದವಿ ಪಡೆದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News