ಮಂಗಳೂರು | ಸಿಡಿಲಿನಿಂದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಕಂಬಗಳಿಗೆ ಹಾನಿ

Update: 2024-06-11 06:59 GMT

ಮಂಗಳೂರು, ಜೂ.11: ನಗರದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿವೆ.

ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಬೋಳೂರು, ರಾಹುಲ್ ಶೆಟ್ಟಿ, ಬೋಳೂರು ಜಯಲಕ್ಷ್ಮಿ ಫ್ರೆಂಡ್ಸ್ ನ ಜೀವನ್ ತಲ್ವಾರ್, ಸೇರಿದಂತೆ ದೈವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News