ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ

Update: 2023-10-05 09:58 GMT

ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.

ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜಾ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆಆರ್ ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆಆರ್ ಲೋಬೋ ಅವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ. ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.

ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು. ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ, ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್,ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್, ಟಿ.ಕೆ ಸುಧೀರ್ ಪದ್ಮರಾಜ್, ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್,ಶಾಲೆಟ್ ಪಿಂಟೋ,ಮಮತಾಗಟ್ಟಿ, ಮುತ್ತಿತರ ನಾಯಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News