ಮಂಗಳೂರು| ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು: ಪ್ರಕರಣ ದಾಖಲು

Update: 2024-10-14 14:57 GMT

ಮಂಗಳೂರು, ಅ.14: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ ವೇಳೆ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ 6 ಪವನು ತೂಕದ ಸರವನ್ನು ಕಳವುಗೈಯಲಾಗಿದೆ. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನು ತೂಕದ ಚಿನ್ನದ ಸರ ಕೂಡಾ ಕಳವಾಗಿದೆ. ಇವುಗಳ ಒಟ್ಟು ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಮಿತಾ ಎಂಬವರು ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News