ಮಂಗಳೂರು : ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿ

Update: 2023-10-21 14:29 GMT

ಮಂಗಳೂರು : ನಗರದ ಬಿಜೈ ನ್ಯೂರೋಡ್‌ನಿಂದ ಭಾರತಿ ನಗರ ಕ್ರಾಸ್‌ಯಾಗಿ ಬಿಜೈಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಿತ್ತು ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿರುವುದಾಗಿ ಕದ್ರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾನು ಶನಿವಾರ ಮುಂಜಾನೆ 5:30ಕ್ಕೆ ಎಂದಿನಂತೆ ತನ್ನ ಮನೆಯಿಂದ ವಾಯುವಿಹಾರಕ್ಕೆ ತೆರಳುತ್ತಿದ್ದ ವೇಳೆ ಬಿಜೈ ಜಂಕ್ಷನ್ ಕಡೆಯಿಂದ ಸುಮಾರು 30 ವರ್ಷ ಪ್ರಾಯದ ಇಬ್ಬರು ಅಪರಿಚಿತರು ಕಪ್ಪು ಬಣ್ಣದ ಬೈಕ್‌ ನಲ್ಲಿ ಬಂದು ತಡೆದು ನಿಲ್ಲಿಸಿ ಬೀಚ್‌ಗೆ ಹೋಗುವ ರಸ್ತೆಯ ಬಗ್ಗೆ ಕೇಳಿ ತನ್ನ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ 1.25 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಿತ್ತು ಬೈಕ್‌ನಲ್ಲೇ ಪರಾರಿಯಾಗಿದ್ದಾರೆ ಎಂದು ಜಯಂತಿ ಭಟ್ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News