ಆ.19 ರಂದು ಬಂಟ್ವಾಳದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ

Update: 2024-08-18 13:52 GMT

ಬಂಟ್ವಾಳ :  ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ ಆ.19ರಂದು ಬಿ.ಸಿ. ರೋಡಿನಲ್ಲಿ ನಡೆಯಲಿದೆ.

ಆ.19ರಂದು ಮಧ್ಯಾಹ್ನ 3 ಗಂಟೆಗೆ ಬಿ.ಸಿ.ರೋಡ್ - ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡ್ ಮಿನಿ ವಿಧಾನಸೌಧ ತನಕ ಪಾದಯಾತ್ರೆ ನಡೆಯಲಿದ್ದು, ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News