ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಬೈರತಿ ಸುರೇಶ್ ಭೇಟಿ

Update: 2023-11-24 15:50 GMT

ಮಂಗಳೂರು : ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.

ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಮಗೆಲ್ಲರಿಗೂ ತಾಯಿ ಇದ್ದಂತೆ. ಕಾಂಗ್ರೆಸ್ ಇಲ್ಲದೆ ನಮ್ಮ ಅಸ್ತಿತ್ವವಿಲ್ಲ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಸರಕಾರವಾಗಿದ್ದು, ಜನಪರವಾದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪಕ್ಷವನ್ನು ಕರಾವಳಿ ಪ್ರದೇಶದಲ್ಲೂ ಸಂಘಟಿಸಿ ಮಂಬರುವ ಚುನಾವಣೆಗಳನ್ನು ಗೆದ್ದು ಜನರ ಸೇವೆ ಮಾಡುವ ಅವಕಾಶ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಐವನ್ ಡಿಸೋಜ, ಪ್ರಮುಖರಾದ ಜಿ.ಕೃಷ್ಣಪ್ಪ, ರಕ್ಷಿತ್ ಶಿವರಾಮ್, ಪದ್ಮರಾಜ್.ಆರ್, ಶಶಿಧರ್ ಹೆಗ್ಡೆ, ಸುರೇಶ್ ಬಳ್ಳಾಲ್, ಪ್ರವೀಣ್ ಚಂದ್ರ ಆಳ್ವ, ಶಾಲೆಟ್ ಪಿಂಟೊ, ಸುರೇಂದ್ರ ಕಂಬಳಿ, ಬೇಬಿ ಕುಂದರ್, ವಿಶ್ವಾಸ್ ದಾಸ್, ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್ ಸ್ವಾಗತಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News