ತೊಕ್ಕೊಟ್ಟು ಇಂದಿರಾ ಕ್ಯಾಂಟೀನ್‌ಗೆ ಸಚಿವ ರಹೀಂ ಖಾನ್ ಭೇಟಿ

Update: 2023-09-06 16:02 GMT

ಮಂಗಳೂರು, ಸೆ.6: ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಬುಧವಾರ ತೊಕ್ಕೊಟಿನಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಕ್ಯಾಂಟಿನ್‌ನ ಮೂಲ ಸೌಕರ್ಯಗಳು, ಸ್ವಚ್ಛತೆ, ಆಹಾರದ ಪ್ರಮಾಣ, ಗುಣಮಟ್ಟ ಹಾಗೂ ಶುಲ್ಕದ ರಶೀದಿ ಸೇರಿದಂತೆ ಮತ್ತಿತರ ಸೌಲಭ್ಯ ಹಾಗೂ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರಲ್ಲದೆ ಅವುಗಳಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಕೊಳ್ಳಲು ಸೂಚಿಸಿದರು.

ಈ ಸಂದರ್ಭ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ವಿ.ಎಸ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News