ದ.ಕ. ಜಿಲ್ಲೆ : ಸೆ.4ರಿಂದ ಸಚಿವ ಝಮೀರ್ ಅಹ್ಮದ್ ಪ್ರವಾಸ

Update: 2023-08-31 14:26 GMT

ಮಂಗಳೂರು,ಆ.31: ರಾಜ್ಯ ವಸತಿ, ವಕ್ಪ್‌ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಸೆ.4ರಿಂದ 6ರವರೆಗೆ ದ.ಕ. ಜಿಲ್ಲೆಯ ಪ್ರವಾಸದಲ್ಲಿದ್ದಾರೆ.

ಸೆ.4ರ ಸಂಜೆ 4:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ನಗರದ ಸರ್ಕ್ಯೂಟ್ ಹೌಸ್‌ಗೆ ತೆರಳಿ ವಾಸ್ತವ್ಯ ಹೂಡುವರು. ಸೆ.5ರ ಬೆಳಗ್ಗೆ 9ಕ್ಕೆ ಯೆನೆಪೋಯ ಅಬ್ದುಲ್ಲಾ ಕುಂಞಿ ಆಯೋಜಿಸಿರುವ ಅಲ್ಪಸಂಖ್ಯಾತರ ಸಮುದಾಯದ ಮುಖಂಡರೊಡನೆ ಚರ್ಚೆ ನಡೆಸುವರು. ಬಳಿಕ ನಗರದ ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12:30ಕ್ಕೆ ಪುತ್ತೂರಿನ ಮಿತ್ತೂರು ಇಡ್ಕಿದು ಗ್ರಾಮದ ದಾರುಲ್ ಇರ್ಷಾದ್ ಆವರಣದಲ್ಲಿ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿ ಶಾಲಾ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1:30ಕ್ಕೆ ಪುತ್ತೂರು ತಾಲೂಕಿನ ಮಾಣಿಗೆ ತೆರಳುವರು. 2:30ಕ್ಕೆ ಮಂಗಳೂರಿಗೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ನಗರದ ಹಜ್ ಭವನದ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು ಹಾಗೂ ಅಲ್ಪಸಂಖ್ಯಾತರ ಮುಖಂಡರೊಡನೆ ಚರ್ಚೆ ನಡೆಸುವರು. ಸಂಜೆ 6ಕ್ಕೆ ಉಳ್ಳಾಲದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸುವರು. 7ಕ್ಕೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವರು. ರಾತ್ರಿ 8ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡುವರು.

ಸೆ.6ರ ಬೆಳಗ್ಗೆ 10ಕ್ಕೆ ಕಣಚೂರು ಮೆಡಿಕಲ್ ಕಾಲೇಜ್ ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದ ಉದ್ಘಾಟಿಸುವರು. ಪೂರ್ವಾಹ್ನ 11ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮಧ್ಯಾಹ್ನ 2ಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 4:25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News