ಶಾಸಕ ಹರೀಶ್ ಪೂಂಜಾ ಸ್ವಾತಂತ್ರ್ಯ ದಿನಾಚರಣೆಗೆ ಅವಮಾನ ಮಾಡಿದ್ದಾರೆ: ನಾಗೇಶ್ ಕುಮಾರ್ ಗೌಡ

Update: 2024-08-15 14:23 GMT

ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಅಧಿಕಾರಿ ವರ್ಗದ ಎದುರಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೋಮುದ್ವೇಷ ಬಿತ್ತುವ ಭಾಷಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ಅವಮಾನ ಮಾಡಿದ್ದಾರೆ. ಇದು ಶಾಸಕರ ಘನತೆಗೆ ಸರಿಯಾದ ವರ್ತನೆಯಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ದೇಶದ ಸೌಹಾರ್ದತೆ ಸಮಗ್ರತೆ, ಸಾರ್ವಭೌಮತ್ವವನ್ನು ಎತ್ತಿ ಹಿಡಿಯಬೇಕಾದ ಶಾಸಕ ಹರೀಶ್ ಪೂಂಜಾ ಧರ್ಮಗಳ ನಡುವೆ ದ್ವೇಷದ ಬೀಜ ಬಿತ್ತುವ ನೀಚತನ ಪ್ರದರ್ಶಿಸಿದ್ದಾರೆ. ಚರಕದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿಲ್ಲ ಎನ್ನುವ ಮೂಲಕ ಮಹಾತ್ಮ ಗಾಂಧಿಯವರನ್ನು ಮತ್ತು ಅವರ ಹೋರಾಟವನ್ನು ಟೀಕೆ ಮಾಡಿರುವುದು ದೇಶದ್ರೋಹಿ ಚಟುವಟಿಕೆಯ ಭಾಗವಾಗಿದೆ. ರಾಜ್ಯ ಸರ್ಕಾರ ಸೇರಿದಂತೆ ಕಾಂಗ್ರೆಸ್ ಪಕ್ಷವನ್ನು ಇಡೀ ಭಾಷಣದುದ್ದಕ್ಕೂ ಟೀಕೆ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಚುನಾವಣಾ ಭಾಷಣದಂತೆ ಮಾಡಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News