ನೆಲ್ಯಾಡಿ: ಉಳಿತೊಟ್ಟಿನಲ್ಲಿ ಮಾ. 07 ರಂದು ಸ್ವಲಾತ್ ವಾರ್ಷಿಕೋತ್ಸವ, ಮದನೀಯಂ ಮಜ್ಲಿಸ್

Update: 2024-03-05 09:49 GMT

ನೆಲ್ಯಾಡಿ : ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ವತಿಯಿಂದ ವಾರ್ಷಿಕ ಸ್ವಲಾತ್ ಕಾರ್ಯಕ್ರಮ ಹಾಗು ಮದನೀಯಂ ಆತ್ಮೀಯ ಮಜ್ಲಿಸ್ ಕಾರ್ಯಕ್ರಮ ಮಾರ್ಚ್ 07 ಗುರುವಾರದಂದು ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.

ಅಸರ್ ನಮಾಝ್ ಬಳಿಕ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಅವರ ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಮಸೀದಿ ಅಧ್ಯಕ್ಷ ಶರೀಫ್ ತಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಳಿತೊಟ್ಟು ಜಮಾಅತ್ ಹಾಗೂ ಉಡುಪಿ, ಹಾಸನ ಜಿಲ್ಲಾ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಳಿತೊಟ್ಟು ಜಮಾಅತ್ ಖತೀಬ್ ಉಸ್ತಾದ್ ಬಹು ಅಬೂಬಕರ್ ಝುಹ್ರಿ ಅಲ್ ಫುರ್ಖಾನಿಯವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಮಗ್ರಿಬ್ ನಮಾಝ್ ಬಳಿಕ ಮದನೀಯಂ ಮಜ್ಲಿಸ್ ಕಾರ್ಯಕ್ರಮ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮಾರಾ ನೇತಾರರು ಭಾಗವಹಿಸಲಿದ್ದಾರೆ ಎಂದು  ಜಮಾಅತ್ ಕಾರ್ಯದರ್ಶಿ ರಸೂಲ್ ಸಾಹೇಬ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News