ಬೈಕಂಪಾಡಿ, ವಾಮಂಜೂರಿನಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಉಪಮುಖ್ಯಮಂತ್ರಿ ಶಿಫಾರಸ್ಸು

Update: 2023-10-10 16:35 GMT

ಸುರತ್ಕಲ್‌: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಮತ್ತು ವಾಮಂಜೂರು ಪ್ರದೇಶದಲ್ಲಿ ನೂತನ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಉಪ ಮುಖ್ಯಮಂತ್ರಿಯವರ ಶಿಫಾರಸ್ಸು ಪತ್ರವನ್ನು ಕೆಪಿಸಿಸಿ ವತಿಯಿಂದ ಮಂಗಳವಾರ ಮನಪಾ ಆಯುಕ್ತರಿಗೆ ಸಲ್ಲಿಸಲಾಯಿತು.

ಬೈಕಂಪಾಡಿ ಮತ್ತು ವಾಮಂಜೂರು ಭಾಗದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಉಪ ಮುಖ್ಯ ಮಂತ್ರಿಯವರಾದ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಇನಾಯತ್ ಅಲಿ ಅವರ ಆಗ್ರಹದ ಮೇರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸ್ಸು ಪತ್ರವನ್ನು ಮಹಾ ನಗರ ಪಾಲಿಕೆ ಆಯುಕ್ತರಿಗೆ ಮಂಗಳವಾರ ಸಲ್ಲಿಸಲಾಯಿತು.

ಈ ಸಂದರ್ಭ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪುರುಷೋತ್ತಮ ಚಿತ್ರಾಪುರ, ಮಾಜಿ ಕಾರ್ಪೊರೇಟರ್ ಕುಮಾರ್ ಮೆಂಡನ್ ಬೈಕಂಪಾಡಿ, ವಿಜಯ್ ಬೈಕಂಪಾಡಿ, ಇನಾಯತ್ ಅಲಿಯವರ ಆಪ್ತ ಸಹಾಯಕ ಅನಸ್ ಅವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News