ಇಂದು ಉಪ್ಪಿನಂಗಡಿಯಲ್ಲಿ ಯುನಿವೆಫ್ ನಿಂದ ಸೀರತ್ ಸಮಾವೇಶ

Update: 2023-11-23 04:16 GMT

ಉಪ್ಪಿನಂಗಡಿ, ನ.23: ಯುನಿವೆಫ್ ಕರ್ನಾಟಕ ಇದರ ವತಿಯಿಂದ 'ಮಾನವ ಧರ್ಮ, ದೈವಿಕ ಕಾನೂನು ಮತ್ತು ಪ್ರವಾದಿ ಮುಹಮ್ಮದ್ (ಸ.)' ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ನ.23ರ ರಾತ್ರಿ 7:30 ಕ್ಕೆ ಉಪ್ಪಿನಂಗಡಿ ಎಚ್.ಎಂ.ಆಡಿಟೋರಿಯಂ ಅವರಣದಲ್ಲಿ ಸೀರತ್ ಸಮಾವೇಶ ಜರುಗಲಿದೆ. ಕಾರ್ಯಕ್ರಮದಲ್ಲಿ ನಿಮ್ರಾ ಮಸೀದಿಯ ಖತೀಬ್ ಹಾಗೂ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ 'ಪ್ರವಾದಿ ಮುಹಮ್ಮದ್ (ಸ.) ರ ಮಾದರಿ ಜೀವನ' ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ.

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಬಿ.ನಝೀರ್ ಮಠ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅಭಿಯಾನದ ಸಂಚಾಲಕ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News