ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಶಹೀದ್ ತೆಕ್ಕಿಲ್ ನೇಮಕ

Update: 2024-04-02 14:52 GMT

ಟಿ.ಎಂ.ಶಹೀದ್ ತೆಕ್ಕಿಲ್

ಸುಳ್ಯ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಎಐಸಿಸಿ ನೇಮಕ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಿ ಆದೇಶ ಮಾಡಲಾಗಿದೆ.

ಸುಳ್ಯ ಅರಂತೋಡಿನವರಾದ ಶಹೀದ್ ಎನ್‍ಎಸ್‍ಯು ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಲ್ಪ ಸಂಖ್ಯಾತರ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯದರ್ಶಿ, ಕೆಪಿಸಿಸಿ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೇಂದ್ರ ನಾರು ಮಂಡಳಿ ಸದಸ್ಯರಾಗಿದ್ದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ವಕ್ಫ್ ಕೌನ್ಸಿಲ್ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೆಪಿಸಿಸಿ ಕಾರ್ಯದರ್ಶಿಯಾಗಿ ಕೊಡಗು ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‍ನ ಮೂವರಿಗೆ ವಿವಿಧ ಜವಾಬ್ದಾರಿ ನೀಡಲಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News