ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಂದ ಗ್ರಾಮ, ಮನೆ, ಮನ ಸಂಪರ್ಕ ಅಭಿಯಾನ

Update: 2024-04-12 17:23 GMT

ಬಂಟ್ವಾಳ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ, ಮನೆ, ಮನ ಸಂಪರ್ಕ ಅಭಿಯಾನದ ಅಂಗವಾಗಿ ಬಂಟ್ವಾಳದ ಸರಪಾಡಿ ಮತ್ತು ದೇವಶ್ಯಮೂಡೂರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಲೋಕಸಭಾ ಅಭ್ಯರ್ಥಿಯ ಪರಿಚಯ ಪತ್ರ ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ ಮಾಹಿತಿ ಕರಪತ್ರವನ್ನು ಮತದಾರರಿಗೆ ನೀಡಿದರು. ಎ. 14 ರಂದು ಮಂಗಳೂರಿನಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.

ಕಾರ್ಯಕರ್ತರನ್ನು ಭೇಟಿಯಾಗಿ ಅವರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾರ್ಯಕರ್ತರು ನಮ್ಮ ನಮ್ಮ ಬೂತ್ ಗಳ ಮನೆಗೆ ಭೇಟಿ ನೀಡಿ, ಮತದಾರರ ಮನವೊಲಿಸಿ, ಬಿಜೆಪಿಗೆ ಮತ ನೀಡುವಲ್ಲಿ ಮನಪರಿವರ್ತನೆ ಮಾಡುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಸರಪಾಡಿ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ , ಉಪಾಧ್ಯಕ್ಷೆ ನಳಿನಿ, ಹಿಂದುಳಿದ ವರ್ಗದ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ದಜ್ವಲ್ ಬಂಗೇರ, ಪ್ರಮುಖರಾದ ಡೀಕಯ್ಯ, ವಸಂತ, ಹರೀಶ್, ಕುಮಾರ್ ಆಳ್ವ, ರಾಜ ಎಕ್ಕುಡೇಲು, ಜಯ ಪೂಜಾರಿ ಕೋಡಿ, ರಾಮಕೃಷ್ಣ ಮಯ್ಯ, ಶರ್ಮಿತ್ ಜೈನ್, ರವೀಂದ್ರ ಶೆಟ್ಟಿ, ಜಗದೀಶ್ ಪೂಜಾರಿ ಕುಂಟಾಲ್ ಪಲ್ಕೆ, ಅನೂಪ್ ಮಯ್ಯ, ಧರಣೇಂದ್ರ ಜೈನ್, ಜಯರಾಮ್ ನಾಯಕ್, ಸುದರ್ಶನ್ ಬಜ ಮತ್ತಿತರರು ಉಪಸ್ಥಿತರಿದ್ದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News