ಬಂಟ್ವಾಳ: ಮಸೀದಿ ಮುಂಭಾಗದಲ್ಲಿ ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿ ಕುಣಿದ ಬಿಜೆಪಿ ಕಾರ್ಯಕರ್ತರು

Update: 2024-06-08 17:01 GMT

ವಿಟ್ಲ: ಬಿಜೆಪಿ ಅಭ್ಯರ್ಥಿ ಪರ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರು ಕರೋಪಾಡಿ ಗ್ರಾಮದ ಮಸೀದಿ ಮುಂಭಾಗ ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿ ಕುಣಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕರೋಪಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದರು. ಕರೋಪಾಡಿ ಗ್ರಾಮದ ಗುಂಡಮಜಲು ಮಸೀದಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಹಾಗೂ ಜೈ ಮೋದಿ ಎಂದು ಘೋಷಣೆ ಕೂಗುತ್ತ ಕುಣಿಯುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇತೀಚೆಗೆ ಕಂಕನಾಡಿ ಮಸೀದಿ ಸಮೀಪದ ರಸ್ತೆಯಲ್ಲಿ ನಮಾಝ್ ಮಾಡಿದ್ದರ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಕೇಸ್ ಹಾಕಿದ್ದರು. ಆದರೆ ಮಸೀದಿ ಮುಂಭಾಗ ಈ ರೀತಿ ವರ್ತಿಸಿದವರ ವಿರುದ್ಧ ಯಾಕೆ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News