ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸಮವಸ್ತ್ರ ವಿತರಣೆ

Update: 2024-06-11 13:06 GMT

ಮಂಗಳೂರು, ಜೂ.11: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉಪಾಧ್ಯಕ್ಷ ರಾದ ಹಾಜಿ ಸಿ.ಮಹಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಪದಾಧಿಕಾರಿಗಳಾದ ಹಾಜಿ ಬಿ. ಅಬೂಬಕರ್, ಡಾ. ಮುಹಮ್ಮದ್ ಆರೀಫ್ ಮಸೂದ್, ಹಾಜಿ ರಿಯಾಝುದ್ದೀನ್, ಸಿ.ಎಂ. ಹನೀಫ್, ಹಾಜಿ ಮೊಯ್ದಿನ್ ಮೋನು, ಅಬ್ಬಾಸ್ ಉಚ್ಚಿಲ್, ಎಂ.ಎ. ಅಶ್ರಫ್, ಬಿ.ಎಸ್. ಇಮ್ತಿಯಾಝ್, ಎಂ. ಅನ್ವರ್ ರೀಕೊ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News