ಅಡ್ಯಾರು ಗ್ರಾಪಂನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

Update: 2024-06-11 16:22 GMT

ಮಂಗಳೂರು, ಜೂ.11: ಅಡ್ಯಾರು ಗ್ರಾಪಂ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಎಸೆಸೆಲ್ಸಿ-ಪಿಯುಸಿ ಬಳಿಕ ಏನು? ಎಂಬ ವಿಷಯದ ಬಗ್ಗೆ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ರಫೀಕ್ ಮಾಸ್ಟರ್ ಭಾಗವಹಿಸಿದ್ದರು. ಅಡ್ಯಾರ್ ಗ್ರಾಪಂ ಅಧ್ಯಕ್ಷ ಅಬ್ದುಲ್ ಜಲೀಲ್ ಸ್ವಾಗತಿಸಿದರು. ಪಿಡಿಒ ಕೃಷ್ಣನಾಯ್ಕ್ ಹೆಚ್. ವಂದಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಈಶ್ವರ್, ಕಂಪ ಸಂದಾನಂದ ಆಳ್ವ, ಅಬ್ದುಲ್ ಖಾದರ್ ದಾರಿಮಿ, ಫ್ಲೋರಿನ್ ಡಿಸೋಜ, ಅಡ್ಯಾರ್ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News