ಶಾಸಕ ಭರತ್ ಶೆಟ್ಟಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸುರತ್ಕಲ್ ಪೊಲೀಸರಿಗೆ ಮನವಿ
Update: 2024-07-10 16:57 GMT
ಸುರತ್ಕಲ್: ರಾಹುಲ್ ಗಾಂಧಿ ವಿರುದ್ಧ ಅವಹೇಳನ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಸುರತ್ಕಲ್ ಪೊಲೀಸರಿಗೆ ಮನವಿ ಸಲ್ಲಿಸಿ ಆಗ್ರಹಿಸಿತು.
ಬುಧವಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮನವಿ ಸಲ್ಲಿಸಿರುವ ಕಾರ್ಯಕರ್ತರು, ನಮ್ಮ ಭಾರತ ದೇಶದ ಸಂಸತ್ತಿನ ಗೌರವಾನ್ವಿತ ವಿರೋಧ ಪಕ್ಷದ ನಾಯಕರು ಮತ್ತು ದೇಶದ ಅಗ್ರ ಗಣ್ಯ ನಾಯಕರಾದ ರಾಹುಲ್ ಗಾಂಧಿಯವರನ್ನು ಸಂಸತ್ತಿನಲ್ಲಿ ಮಾಡಿದ ಭಾಷಣವನ್ನು ತಿರುಚಿ ರಾಹುಲ್ ಗಾಂಧಿಯವರನ್ನು ಸಂಸತ್ತಿನ ಒಳಗೆ ಹೋಗಿ ಕಪಾಳಮೋಕ್ಷ ಮಾಡಬೇಕೆಂದು ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ್ದು ಮತ್ತು ಶಸ್ತ್ರ ಹೇಗೆ ಉಪಯೋಗಿಸಬೇಕುವೆಂಬುದು ಸಾರ್ವಜನಿಕವಾಗಿ ಮಾತಾನಾಡಿದ ಶಾಸಕ ಭರತ್ ಶೆಟ್ಟಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭ ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜೈಸನ್ ಮೊದಲಾದವರು ಇದ್ದರು.