ಕೋಟ ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ

Update: 2024-09-23 12:12 GMT

ಮಂಗಳೂರು, ಸೆ.23: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ 2024ರ ಅ.10ರಂದು ನಡೆಯುವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಪ್ರಯುಕ್ತ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾಲೇಜು ವಿಭಾಗಕ್ಕೆ ಱಕಾರಂತರ ವಿಜ್ಞಾನ ಸಾಹಿತ್ಯ - ಮಕ್ಕಳ ಸಾಹಿತ್ಯ ಅವಲೋಕನ, ಅನುಸಂಧಾನ ಮತ್ತು ಮುಕ್ತ ವಿಭಾಗದಲ್ಲಿ ಱಕಾರಂತರ ಸಾಹಿತ್ಯ (ಕಾದಂಬರಿಗಳು) ಅವಲೋಕನ, ಅನುಸಂಧಾನ ಎಂಬ ವಿಷಯದಲ್ಲಿ ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅ. 6ರೊಳಗೆ ಸ್ವವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೋಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News