ಉಳ್ಳಾಲ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ ಸಭೆ

Update: 2024-09-23 12:36 GMT

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ)ಇದರ ಉಳ್ಳಾಲ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯು ಇತ್ತೀಚೆಗೆ ಉಳ್ಳಾಲದ ತೊಕ್ಕೊಟ್ಟಿನ ಶ್ರೀರತ್ನಮ್ ಹೋಟೆಲಿನಲ್ಲಿ ನಡೆಯಿತು.

ರಾಜ್ಯ ಸರಕಾರದಿಂದ ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಹಾಗೂ ಶ್ರೀ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ಘಟಕದ ಗೌರವಾಧ್ಯಕ್ಷ ಸುರೇಶ್ ಭಟ್ನಗರ ಹಾಗೂ ರಾಜ್ಯ ವಕ್ಫ್ ಮಂಡಳಿಯ ಸದಸ್ಯೆಯಾಗಿ ನೇಮಕಗೊಂಡ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಸದಸ್ಯೆ ರಝಿಯಾ ಇಬ್ರಾಹೀಮ್ ಅವರನ್ನು ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಮಸಾಪ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷೆ ಸಿಹಾನ ಬಿ.ಎಂ., ಉಪಾಧ್ಯಕ್ಷೆ ದಾಕ್ಷಾಯಿಣಿ, ಕಾರ್ಯದರ್ಶಿ ನವೀನ್ ನಾಯಕ್, ಕೋಶಾಧಿಕಾರಿ ದೇವಕಿ ಉಳ್ಳಾಲ್, ಸದಸ್ಯರಾದ ಪವನ್‌ರಾಜ್, ಪ್ರೇಮಾ ಮೂಗಪ್ಪ, ಶಶಿಕಲಾ ಗಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News