ವಿಧಾನ ಪರಿಷತ್ ಚುನಾವಣೆ: ನೀತಿ ಸಂತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

Update: 2024-09-23 13:20 GMT

ಮಂಗಳೂರು, ಸೆ.23: ಸ್ಥಳಿಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು, ಸೆ. 19ರಿಂದ ಅ.28ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯ ವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿ ಕಚೇರಿಯ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ ಮುಂಚಿತ ವಾಗಿ ಮಾಹಿತಿಯನ್ನು ನೀಡಬೇಕು ಹಾಗೂ ಅರ್ಜಿಯನ್ನು ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ರಾಜಕೀಯ ರಹಿತವಾದ ಇತರೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವ ಆಯೋಜಕರು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಯಲ್ಲಿ ಮತ್ತು ಮಹಾನಗರ ಪಾಲಿಕೆಯಲ್ಲಿ ತೆರೆಯಲಾಗಿರುವ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಬೇಕು ಹಾಗೂ ಅರ್ಜಿಯನ್ನು ಸಲ್ಲಿಸಿ ತಾಲೂಕು ತಹಶೀಲ್ದಾರರಿಂದ ಮತ್ತು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಿಂದ ಅನುಮತಿಯನ್ನು ಪಡೆದುಕೊಳ್ಳುವಂತೆ ಸೂಚಿಸಿದೆ.

ಸಾರ್ವಜನಿಕ ಮದುವೆ ಮತ್ತಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸುವವರು ಅನುಮತಿಯನ್ನು ಪಡೆಯುವ ಅವಶ್ಯಕತೆ ಇರುವುದಿಲ್ಲ. ಆದರೆ ಸಭೆ/ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು. ಸಾರ್ವಜನಿಕರು ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರ ಅಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News