ವಿಶ್ವ ಕೌಶಲ್ಯ ಸ್ಪರ್ಧೆ: ಮಂಗಳೂರಿನ ಹರ್ಷವರ್ಧನ್‌ಗೆ ಶ್ರೇಷ್ಠತಾ ಪದಕ

Update: 2024-09-24 15:40 GMT

ಮಂಗಳೂರು, ಸೆ.24: ಫ್ರಾನ್ಸ್ ನ ಲಿಯೋನ್‌ನಲ್ಲಿ ಸೆ. 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶ್ರೀ ಹರ್ಷವರ್ಧನ್ ರವರು ಕುಕ್ಕಿಂಗ್ ವಿಭಾಗದ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ.

ಕರ್ನಾಟಕದ 9 ಸ್ಪರ್ಧಾಳುಗಳು ಭಾಗವಹಿಸಿದ್ದು ,ಈ ಪೈಕಿ ಇದಕ್ಕೂ ಮುನ್ನ ಕಳೆದ ಮೇ ತಿಂಗಳಲ್ಲಿ ಹೊಸದಿಲ್ಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಇವರು ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಉಚಿತವಾಗಿ ತರಬೇತಿಯನ್ನು ನೀಡಲಾಗಿದೆ.

ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಶ್ರವಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ, ಹರ್ಷವರ್ಧನ್ ಅವರ ತಂದೆ ವಿಜಯ ಆರ್.ಕೆ ರವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News