ಮಂಗಳೂರು ದಸರಾ: ಜನಾರ್ದನ ಪೂಜಾರಿಯಿಂದ ಸಿದ್ಧತೆ ವೀಕ್ಷಣೆ

Update: 2024-09-25 15:47 GMT

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ.3ರಿಂದ 14ರವರೆಗೆ ‘ಮಂಗಳೂರು ದಸರಾ ಮಹೋತ್ಸವ 2024’ ಜರುಗಲಿದ್ದು, ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಬುಧವಾರ ಸಿದ್ಧತೆಗಳನ್ನು ವೀಕ್ಷಿಸಿದರು.

ಕ್ಷೇತ್ರದ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಜಿ.ಸುವರ್ಣ, ಶ್ರೀ ಗೋಕರ್ಣನಾಥ ಸೇವಾದಳ ಸದಸ್ಯರು ಇದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News