ದ.ಕ. ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ : ಡಿಸಿ ಮುಲ್ಲೈ ಮುಗಿಲನ್

Update: 2024-09-26 14:48 GMT

ಮಂಗಳೂರು: ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂದರು.

ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರೂ ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ಗುರುವಾರ ನಡೆದ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ಸೌಲಭ್ಯಗಳು ಜಿಲ್ಲೆಯಲ್ಲಿದೆ ಎಂದು ಮುಲ್ಲೈ ಮುಗಿಲನ್ ಹೇಳಿದರು.

ಮನಪಾ ಆಯುಕ್ತ ಆನಂದ್ ಸಿ.ಎಲ್, ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ., ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ಸೂಡಿಮುಳ್ಳು, ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ ಅಸ್ಲಂ, ದೈಹಿಕ ಶಿಕ್ಷಕ ಪರೀಕ್ಷಣಾಧಿಕಾರಿ ಭರತ್ ಕುಮಾರ್ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿದರು.


 



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News