ಉಳ್ಳಾಲ: ಸಯ್ಯಿದ್ ಮದನಿ ದರ್ಗಾ ಸಮಿತಿಗೆ ಸುಸಜ್ಜಿತ ಆಂಬುಲೆನ್ಸ್ ಬಿಡುಗಡೆ
Update: 2024-10-06 14:50 GMT
ಉಳ್ಳಾಲ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಉಳ್ಳಾಲ ಜುಮಾ ಮಸ್ಜಿದ್ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ಗೆ ಸುಸಜ್ಜಿತ ಆಂಬುಲೆನ್ಸ್ ಬಿಡುಗಡೆ ಸಮಾರಂಭವು ಬೆಂಗಳೂರಿನ ಹಜ್ ಘರ್ ನ ಸಭಾಂಗಣ ವೇದಿಕೆಯಲ್ಲಿ ನೆರವೇರಿತು.
ಸಮಾರಂಭದಲ್ಲಿ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಸಂಸದ ನಾಸಿರ್ ಹುಸೈನ್, ಮುಖ್ಯ ಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಸಚೇತಕ ಸಲೀಂ ಅಹ್ಮದ್, ಉರ್ದು ಅಕಾಡೆಮಿ ಅಧ್ಯಕ್ಷ, ಮುಹಮ್ಮದ್ ಅಲೀ ಖಾಝಿ, ರಾಜ್ಯ ವಕ್ಫ್ ಸದಸ್ಯರಾದ ಮೌಲಾನಾ ಶಾಫೀ ಸಅದಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ದ.ಕ. ವಕ್ಫ್ ಅಧಿಕಾರಿ ಅಬೂಬಕ್ಕರ್, ದರ್ಗಾ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಂ ರಹ್ಮಾನ್ ಸದಸ್ಯರಾದ ಅಬ್ದುಲ್ ಖಾದರ್ ಕೋಡಿ ಮತ್ತು ಇಬ್ರಾಹೀಂ ಶೌಕತ್ ಉಪಸ್ಥಿತರಿದ್ದರು.