ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ

Update: 2024-10-10 16:45 GMT

ಬಜ್ಪೆ: ಗುರುಪುರ ಹಾಗೂ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ವಾಮಂಜೂರು ಚರ್ಚ್ ಸಭಾಭವನದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಗುರುವಾರ ಜರುಗಿತು.

ಕೆಪಿಸಿಸಿ ಕಾರ್ಯಾಧ್ಯಕ್ಷರು ವಿಧಾನ ಪರಿಷತ್ತು ಸದಸ್ಯರಾದ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್‌ ಅಲಿ, ಪದ್ಮರಾಜ್ ಆರ್. ಪೂಜಾರಿ, ‌ಉಪ ಚುನಾವಣೆಯ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಮೊದಲಾದವರು ಮಾತನಾಡಿ ಪಕ್ಷ ಸಂಘಟನೆಗೆ ಕರೆ ನೀಡಿದರು.

ಸಬೆಯಲ್ಲಿ ಎಂ.ಎಸ್ ಮುಹಮ್ಮದ್, ಮ.ನ.ಪಾ‌ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪುರುಷೋತ್ತಮ ಚಿತ್ರಾಪುರ, ಎಂ.ಜಿ. ಹೆಗ್ಡೆ, ಗಿರೀಶ್ ಆಳ್ವ, ಜಿ.ಪಂ. ಸದಸ್ಯರಾದ ಕೃಷ್ಣ ಅಮೀನ್‌, ಮೆಲ್ವನ್‌ ಸಾಲ್ಡಾನ, ಗುರುಪುರ ಹಾಗೂ ಸುರತ್ಕಲ್ ಬ್ಲಾಕ್ ವ್ಯಾಪ್ತಿಯ ಜಿಲ್ಲಾ,ಬ್ಲಾಕ್ ವಲಯ-ವಾರ್ಡ್ ಬೂತ್ ಸಮಿತಿಯ ಪದಾಧಿಕಾರಿಗಳು, ಮುಖಂಡರು ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News