ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ
ಮಂಗಳೂರು: ದ.ಕ. ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರಡಿ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಹಾಗಾಗಿ 30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರಡಿ ಶ್ವೇತವರ್ಣದಡಿ ಜೀವ ವೈದ್ಯಕೀಯ ತ್ಯಾಜ್ಯ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ಚಾಲನಾ ಸಮ್ಮತಿ ಪತ್ರ/ಅಧಿಕಾರ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನ ಸಮ್ಮತಿ/ಚಾಲನಾ ಸಮ್ಮತಿ ಪತ್ರ/ಅಧಿಕಾರ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮಜರುಗಿಸಲಿದೆ.
ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ ಮಂಗಳೂರು (ದೂ.ಸಂ: 2408239) ಸಂಪರ್ಕಿಸುವಂತೆ ಪರಿಸರ ಅಧಿಕಾರಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.