ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಗೆ ಸಮಿತಿ ರಚನೆಗೆ ತಾರಾನಾಥ ಗಟ್ಟಿ ಆಗ್ರಹ

Update: 2024-10-27 17:05 GMT

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ದಿನದಂದು ನೀಡಲಾಗುವ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ದ.ಕ. ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿರುವ ಅವರು ಈಗಾಗಲೇ ರಾಜ್ಯೋತ್ಸವ ದಿನದಂದು ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಮತ್ತು ಪ್ರಶಸ್ತಿಯ ಆಯ್ಕೆಗೆ ಅರ್ಜಿ ಸಲ್ಲಿಸಲು ಜಿಲ್ಲಾಡಳಿತ ಮಾಧ್ಯಮಗಳ ಮೂಲಕ ಸಾರ್ವಜನಿಕ ಪ್ರಕಟನೆ ನೀಡಿದೆ. ಈ ಪ್ರಶಸ್ತಿಯ ಆಯ್ಕೆಗೆ ಮಾನದಂಡವನ್ನು ರಚಿಸಬೇಕು ಹಾಗೂ ಇದಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಬೇಕು ಎಂದು ವಿನಂತಿಸಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ರಾಜ್ಯೋತ್ಸವದ ಒಂದು ದಿನದ ಮೊದಲೇ ಪತ್ರಿಕೆಗಳ ಮೂಲಕ ಪ್ರಕಟಿಸುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News